Blog Archives

ವಿಷಯಕ್ಕೊಂದು ವಿಶ್ವ ವಿದ್ಯಾನಿಲಯ….?

ವಿಷಯಕ್ಕೊಂದು ವಿಶ್ವ ವಿದ್ಯಾನಿಲಯ ಸ್ಥಾಪಿಸುವುದು ನಮ್ಮ ಶಿಕ್ಷಣ ಕ್ಷೇತ್ರವನ್ನು ಬಾಧಿಸುತ್ತಿರುವ ಮಾರಕ ರೋಗ. ಇದನ್ನು ನೋಡುತ್ತಿದ್ದರೆ ನಾವು ನಮ್ಮ ದೇಶವನ್ನು ದ್ವಿತೀಯ ಸ್ಥಾನಕ್ಕೆ ಕೊಂಡೊಯ್ಯಲು ಶಕ್ತಿಮೀರಿ ಪ್ರಯತ್ನಿಸುತ್ತಿದ್ದೇವೆ ಎಂಬ ಸಂಶಯ ಬರುತ್ತದೆ….ನಮಗೆ ಚಿಂತನೆ  ಮತ್ತು ಆಲೋಚನೆಗಳಲ್ಲಿ ಯಾವತ್ತೂ ಮುಂಚೂಣಿಯಲ್ಲಿರಲು ಸಾಧ್ಯವಿಲ್ಲ. ಎಂದು ನಾವೇ ನಿರ್ಧರಿಸಿಬಿಟ್ಟಿದ್ದೇವೆ. ಜೊತೆಗೆ ಶಿಕ್ಷಣವನ್ನೂ ಒಂದು ಲಾಭದಾಯಕ ಉದ್ಯಮವೆಂದು ಭಾವಿಸುವವರಿಗೆ ಈ ವಿಷಯ ವಿಶ್ವವಿದ್ಯಾಲಯಗಳು ಗಳಿಕೆ ಯ ಮಾರ್ಗವೂ ಆಗಿಬಟ್ಟಿವೆ….
ಎಂದಿದ್ದಾರೆ ಹಿರಿಯ ವಿಜ್ಞಾನಿ, ಶಿಕ್ಷಣ ತಜ್ಞ ಪ್ರೊ.ಯಶ್ ಪಾಲ್. (ಪ್ರ.ವಾಣಿ)

ವಿಶ್ವವಿದ್ಯಾಲಯ ಎಂಬ ಪರಿಕಲ್ಪನೆಗೇ ವಿರುದ್ಧವಾಗಿರುವ  ಈ “ವಿಷಯ ವಿಶ್ವವಿದ್ಯಾಲಯಗಳು” ವಿಶ್ವವಿದ್ಯಾಲಯಗಳನ್ನು ಕೇವಲ ತರಬೇತಿ ಸಂಸ್ಥೆಗಳಾಗಿ ಪರಿವರ್ತಿಸಿಬಿಡುತ್ತವೆ. ಅಂದರೆ ವಿಶ್ವವಿದ್ಯಾಲಯಗಳು ವಿಶಾಲ ಮನೋಭಾವದ ಪಾಂಡಿತ್ಯವುಳ್ಳ ನಾಗರೀಕರನ್ನು ಸೃಷ್ಟಿಸುವ ಕೆಲಸವನ್ನೂ ನಿಲ್ಲಿಸಿಬಿಡುತ್ತವೆ….ಯಾಕೆಂದರೆ, ನಮ್ಮ ಸರ್ಕಾರಕ್ಕೆ ಬೇಕಿರುವುದು ತನ್ನ ಗೊಡ್ಡು ಚಿಂತನೆಗಳನ್ನು ಪ್ರಶ್ನಿಸದ ನಾಗರಿಕ ಸಮಾಜವಷ್ಟೇ… ಇದು ಬಡವರನ್ನು ಉನ್ನತ ಶಿಕ್ಷಣದಿಂದ ಹೊರಗಿಡುವ ಕ್ರಿಯೆಯೂ ಆಗಿಬಿಡುತ್ತದೆ.. ಆದ್ದರಿಂದ ವಿಷಯ ವಿದ್ಯಾಲಯಗಳ ಸ್ಥಾಪನೆ ಒಂದು ಅಪ್ರಜಾಸತ್ತಾತ್ಮಕ ನೀತಿ.
-ಎಂದಿದ್ದಾರೆ ಕೇರಳ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷರಾದ ಡಾ.ಕೆ.ಎನ್.ಪಣಿಕ್ಕರ್. (ಪ್ರ.ವಾಣಿ)

ಮೇಲೆ ತಿಳಿಸಿದ ಹಿರಿಯ ಶಿಕ್ಷಣ ತಜ್ಞರೂ ಮೇಧಾವಿಗಳ ಮಾತನ್ನು ನಮ್ಮ ಇಂದಿನ ಶಿಕ್ಷಣತಜ್ಞರು ಮತ್ತು ಸರ್ಕಾರಗಳು ಗಂಭೀರವಾಗಿ ತೆಗೆದುಕೊಳ್ಳುವುದು ಅತ್ಯಗತ್ಯವಾಗಿದೆ. ಇಲ್ಲವಾದರೆ, ಮುಂದೊಂದು ದಿನ ಜ್ಞಾನ ದೇಗುಲ ಗಳೆಂದು ಕರೆಸಿಕೊಳ್ಳುವ, ನಮ್ಮ ಮುಂದಿನ ಪೀಳಿಗೆ ಶಿಕ್ಷಣ ನೀಡುವ ವಿಶ್ವವಿದ್ಯಾಲಯಗಳೂ ಕೇವಲ “ಇಂಡಸ್ಟ್ರಿ” (ಕಾರ್ಖಾನೆ) ಗಳಾಗಿ ಬಿಡುತ್ತವೆಯಷ್ಟೇ. ಬಡವರಿಗೆ ಉನ್ನತ ಶಿಕ್ಷಣವೆಂಬುದು ಮರೀಚಿಕೆಯಾಗುತ್ತದೆ.  ಅಂತಹ ಸಾಮಾಜವಾದ ವಿರೋಧಿ ನೀತಿಯಿಂದ  ಅಪಾಯ ಬರದಿರುವಂತೆ ಸಂಬಂಧಪಟ್ಟ ಗಣ್ಯರು ಶಿಕ್ಷಣತಜ್ಞರೂ ಸೂಕ್ತ ಕ್ರಮ ತಡೆಯಾಜ್ಞೆಗಳತ್ತ ಗಮನ ಹರಿಸಬೇಕಲ್ಲವೇ…?

 

Follow

Get every new post delivered to your Inbox.